Home ಟಾಪ್ ಸುದ್ದಿಗಳು ಕ್ಷುಲ್ಲಕ ಕಾರಣಕ್ಕೆ ಜಗಳ: ಯುವಕನ ಬರ್ಬರ ಹತ್ಯೆ

ಕ್ಷುಲ್ಲಕ ಕಾರಣಕ್ಕೆ ಜಗಳ: ಯುವಕನ ಬರ್ಬರ ಹತ್ಯೆ

ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಮಲ್ಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ.


ಯೋಗೇಶ್ (32) ಕೊಲೆಯಾದ ಯುವಕ. ಪ್ರದೀಪ್ (31) ಹತ್ಯೆಗೈದ ದುಷ್ಕರ್ಮಿ.


ಕೊಲೆಯಾದ ಯೋಗೇಶ್ ಹಾಗೂ ಆತನ ತಾಯಿ ಭಾಗ್ಯಮ್ಮ ಜೊತೆ ಪ್ರದೀಪ್ ಪದೇ ಪದೇ ಜಗಳ ಮಾಡುತ್ತಿದ್ದ. ಮಂಗಳವಾರ ಸಂಜೆಯೂ ಇದೇ ರೀತಿ ಜಗಳ ಶುರುವಾಗಿದ್ದು, ಕೋಪ ವಿಕೋಪಕ್ಕೆ ತಿರುಗಿದೆ. ಕೋಪದ ಭರದಲ್ಲಿ ಪ್ರದೀಪ್ ತನ್ನ ಮನೆಯಲ್ಲಿದ್ದ ಚಾಕು ತಂದು ಯೋಗೇಶ್ ಗೆ ಇರಿದಿದ್ದಾನೆ. ಚಾಕು ಇರಿತಕ್ಕೊಳಗಾದ ಯೋಗೇಶ್ ನನ್ನು ತಕ್ಷಣವೇ ಸ್ಥಳಿಯರು ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ತೀವ್ರ ರಕ್ತಸ್ರಾವ ಉಂಟಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಯೋಗೇಶ್ ಮೃತಪಟ್ಟಿದ್ದಾನೆ.
ಘಟನೆಯ ಕುರಿತು ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Join Whatsapp
Exit mobile version