ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ: ಆರೋಪಿ ಪರಾರಿ

Prasthutha|

ಮೈಸೂರು: ಯುವಕನೋರ್ವನನ್ನು ಕಲ್ಲಿನಿಂದ ಜಜ್ಜಿ, ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದೆ.

- Advertisement -

ಹೇಮಂತ್ ಅಲಿಯಾಸ್ ಸ್ವಾಮಿ(23)ಕೊಲೆಯಾದ ಯುವಕನ

ಸಾಗರ್, ಪ್ರತಾಪ್, ಮಂಜು ಎಂಬುವರಿಂದ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಹೇಮಂತ್​​ ಸಹೋದರಿಯನ್ನು ಆರೋಪಿ ಸಾಗರ್​​​ ಪ್ರೀತಿಸುತ್ತಿದ್ದನೆಂದು ಕೇಳಿಬಂದಿದ್ದು, ಇದೇ ವಿಚಾರಕ್ಕೆ ಹೇಮಂತ್​ ನ ನಡುವೆ ವೈಷಮ್ಯ ಏರ್ಪಟಿದೆ. ಈ ಹಿನ್ನಲೆ ಸ್ನೇಹಿತರೊಟ್ಟಿಗೆ ಸೇರಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಸ್ಥಳಕ್ಕೆ ವಿಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp