Home ಟಾಪ್ ಸುದ್ದಿಗಳು ಸೆಲ್ಫಿ ತೆಗೆದುಕೊಳ್ಳುವಾಗ ನದಿಗೆ ಬಿದ್ದು ಯುವಕ ಮೃತ್ಯು

ಸೆಲ್ಫಿ ತೆಗೆದುಕೊಳ್ಳುವಾಗ ನದಿಗೆ ಬಿದ್ದು ಯುವಕ ಮೃತ್ಯು

ಮಡಿಕೇರಿ: ಸೆಲ್ಫಿ ಹುಚ್ಚಿಗೆ ಬೆಂಗಳೂರು ಮೂಲದ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯ ಮುಂಭಾಗದ ಸೇತುವೆ ಬಳಿ ನಡೆದಿದೆ.


ಬೆಂಗಳೂರು ಮೂಲದ ಸಂದೀಪ್ (41) ಸೆಲ್ಫಿ ಕ್ರೇಜ್ ಗೆ ಬಲಿಯಾದ ವ್ಯಕ್ತಿ.


ಗುರುವಾರ ಸಂದೀಪ್ ತನ್ನ ಮೂವರು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಮೈಸೂರು ಮಾರ್ಗವಾಗಿ ಕೊಡಗಿನ ಗೋಣಿಕೊಪ್ಪ ಹಾಗೂ ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿದ್ದರು. ಕಾರಿನಲ್ಲಿ ಬಂದ ಸಂದೀಪ್ ಹಾಗೂ ಆತನ ಗೆಳೆಯರು ಹಾರಂಗಿ ಮುಂಭಾಗದ ಸೇತುವೆ ಬಳಿ ಹೋಗಿ ಜಲಾಶಯದಿಂದ ಕಾವೇರಿ ನದಿಗೆ 4 ಕ್ರಸ್ಟ್ರರ್ ಗೇಟ್ ಮೂಲಕ ನೀರು ಬಿಟ್ಟಿರುವುದನ್ನು ಕಂಡು ಸೆಲ್ಫಿ ತೆಗೆಯಲು ಮುಂದಾಗಿದ್ದರು. ಸೇತುವೆ ಕಟ್ಟೆ ಮೇಲೆ ನಿಲ್ಲುವ ವೇಳೆ ಸಂದೀಪ್ ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದಿದ್ದಾನೆ. ಬಳಿಕ ಗುರುವಾರ ಸಂಜೆಯಿಂದ ಸಂದೀಪ್ ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗಿದೆ. ಶುಕ್ರವಾರ ಮಧ್ಯಾಹ್ನ ಅವರ ಮೃತದೇಹ ಪತ್ತೆಯಾಗಿದೆ.

Join Whatsapp
Exit mobile version