ಬೆಳ್ತಂಗಡಿ: ಸ್ನಾನಕ್ಕೆಂದು ಹೊಳೆಗೆ ಇಳಿದ ಯುವಕ ನೀರಿನಲ್ಲಿ ಸಿಲುಕಿ ಮೃತ್ಯು!

Prasthutha|

ಬೆಳ್ತಂಗಡಿ: ಸ್ನಾನ ಮಾಡಲೆಂದು ಹೊಳೆಗೆ ಇಳಿದಿದ್ದ ಯುವಕ ನೀರಿನಲ್ಲಿ ಸಿಲುಕಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕುತ್ರೊಟ್ಟು ಎಂಬಲ್ಲಿ ನಡೆದಿದೆ.

- Advertisement -

ಮೃತಪಟ್ಟ ಯುವಕನನ್ನು ಲಾಯಿಲ ಗ್ರಾಮದ ಕಾಶಿಬೆಟ್ಟು ನಿವಾಸಿ ಇಸ್ಮಾಯಿಲ್ ಎಂಬವರ ಮಗ ನಬಾನ್(22) ಎಂದು ಗುರುತಿಸಲಾಗಿದೆ.

 ಸ್ನಾನ ಮಾಡಲೆಂದು ಮೂವರು ಗೆಳೆಯರೊಂದಿಗೆ ಕುತ್ರೊಟ್ಟು ದೇವರಗುಂಡಿ ಹೊಳೆಗೆ ಇಳಿದಿದ್ದ ನಬಾನ್ ನೀರಿನಲ್ಲಿ ಸಿಲುಕಿದ್ದಾನೆ ಎಂದು ವರದಿಯಾಗಿದೆ.

- Advertisement -

ಕೂಡಲೇ ಸ್ಥಳೀಯರ ಸಹಾಯದಿಂದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾನೆ.

ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಶವಾಗಾರದಲ್ಲಿ ಇರಿಸಲಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp