ಉಪ್ಪಿನಂಗಡಿ | ಕೆಮ್ಮಾರ ನದಿಯಲ್ಲಿ ಯುವಕ ನೀರುಪಾಲು

Prasthutha|

ಉಪ್ಪಿನಂಗಡಿ : ಉಪ್ಪಿನಂಗಡಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಮ್ಮಾರ ನದಿಯಲ್ಲಿ ಯುವಕನೊಬ್ಬ ನೀರುಪಾಲಾಗಿರುವ ಘಟನೆ ಬುಧವವಾರ ಮಧ್ಯಾಹ್ನ ನಡೆದಿದೆ. ನೀರುಪಾಲಾದ ಯುವಕನನ್ನು ಸ್ಥಳೀಯ ನಿವಾಸಿ ಇಸ್ಮಾಯಿಲ್ ಎಂಬವರ ಮಗ ಶಫೀಕ್ (19) ಎಂದು ಗುರುತಿಸಲಾಗಿದೆ.

- Advertisement -


ಜಿಲ್ಲೆಯಲ್ಲಿ ಇತ್ತೀಚೆಗೆ ವಿಪರೀತ ಮಳೆ ಸುರಿಯುತ್ತಿದ್ದು, ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಯುವಕ ನದಿ ಬಳಿ ಯಾಕೆ ತೆರಳಿದ್ದಾನೆ ಎನ್ನುವ ಮಾಹಿತಿ ಇನ್ನೂ ಲಭ್ಯವಾಗಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಈಜುಗಾರರರಿಂದ ಶಫೀಕ್ ಗಾಗಿ ಹುಡುಕಾಟ ಕಾರ್ಯ ನಡೆಯುತ್ತಿದೆ

Join Whatsapp