ಐದನೇ ಮಹಡಿಯಿಂದ ಬಿದ್ದು ಯುವಕ ಸಾವು: ಆತ್ಮಹತ್ಯೆ ಶಂಕೆ

Prasthutha|

ಬೆಂಗಳೂರು: ಸುಚಿರ್ (21) ಎಂಬುವರು ವಿದ್ಯಾರಣ್ಯಪುರದ ಎನ್‌’ಟಿಐ ಜಂಕ್ಷನ್ ಸಮೀಪದ ಅಪಾರ್ಟ್‌ಮೆಂಟ್’ನ ಐದನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ.

- Advertisement -

‘ಸ್ಥಳೀಯ ಕಾಲೇಜೊಂದರ ವಿದ್ಯಾರ್ಥಿ ಸುಚಿ‌ರ್ ಹಲವು ದಿನಗಳಿಂದ ಮಾನಸಿಕವಾಗಿ ನೊಂದಿದ್ದರು. ಒಂದು ಬಾರಿ ಆತ್ಮಹತ್ಯೆಗೂ ಯತ್ನಿಸಿದ್ದರೆಂದು ತಿಳಿದು ಬಂದಿದೆ. ಮಂಗಳವಾರ ಬೆಳಿಗ್ಗೆ ಐದನೇ ಮಹಡಿಗೆ ಹೋಗಿದ್ದ ಸುಚಿರ್‌, ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ.

ಅವರ ತಂದೆ ಅಮೆರಿಕದಲ್ಲಿ ಉದ್ಯೋಗದಲ್ಲಿದ್ದು, ತಾಯಿ ಜೊತೆ ವಾಸವಿದ್ದರು. ‘ತಾಯಿ ಹಾಗೂ ಸ್ಥಳೀಯ ಪ್ರತ್ಯಕ್ಷದರ್ಶಿಗಳ ಹೇಳಿಕೆ ಪಡೆದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

Join Whatsapp