ಯುವಕ ಲಾಕಪ್ ಡೆತ್| ಠಾಣೆಗೆ ನುಗ್ಗಿದ ಉದ್ರಿಕ್ತರಿಂದ ಮಹಿಳಾ ಪೇದೆಯ ಹತ್ಯೆ!

Prasthutha|

ಬಿಹಾರ:  ಬಿಹಾರದಲ್ಲಿ ಲಾಕಪ್ ಡೆತ್ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಉದ್ರಿಕ್ತ ಜನರು ಮಹಿಳಾ ಪೇದೆಯನ್ನು ಹತ್ಯೆಗೈದಿದ್ದಾರೆ.

- Advertisement -

ಜೆಹಾನಾಬಾದ್ ನಲ್ಲಿ ಮದ್ಯ ವ್ಯಾಪಾರದಲ್ಲಿ ತೊಡಗಿದ್ದಾನೆಂದು ಆರೋಪಿಸಿ ಗೋವಿಂದ್ ಮಾಂಝಿ ಎಂಬಾತನನನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಈತ ಔರಂಗಾಬಾದ್ ಜಿಲ್ಲೆಯ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ. ಪೊಲೀಸರು ಗೋವಿಂದಗೆ ದೈಹಿಕ ಚಿತ್ರಹಿಂಸೆ ನೀಡಿದ್ದರಿಂದ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಗ್ರಾಮಸ್ಥರು ಪೊಲೀಸ್ ಠಾಣೆಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಅವರನ್ನು ತಡೆದಿದ್ದಾರೆ.

 ಇದರಿಂದ ಕೋಪಗೊಂಡ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದಾರೆ. ಉದ್ರಿಕ್ತರನ್ನು ಚದುರಿಸಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸ್ ಪೇದೆ ಕಾಂತಿ ದೇವಿ ಅವರಿಗೆ ವಾಹನ ಡಿಕ್ಕಿ ಹೊಡೆದು ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ.

- Advertisement -

ಪ್ರಕರಣ ಸಂಬಂಧ ಐದು ಜನರನ್ನು ಬಂಧಿಸಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸ್ ವಿಶೇಷ ಪಡೆಗಳನ್ನು ನೇಮಿಸಲಾಗಿದೆ.

Join Whatsapp