ಯುವಕರು ನಿರುದ್ಯೋಗದಿಂದ ತಪ್ಪು ದಾರಿ ಹಿಡಿಯುತ್ತಿದ್ದಾರೆ, ಇದಕ್ಕೆ ಬಿಜೆಪಿ ಹೊಣೆ: ನಲಪಾಡ್

Prasthutha|

ಮೈಸೂರು: ನಿರುದ್ಯೋಗ ಇರುವ ಕಾರಣ ಯುವಕರು ತಪ್ಪು ದಾರಿ ಹಿಡಿದಿದ್ದಾರೆ. ಇದಕ್ಕೆ ಬಿಜೆಪಿ ನೇರ ಹೊಣೆ ಎಂದು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮುಹಮ್ಮದ್ ಹ್ಯಾರಿಸ್ ನಲಪಾಡ್ ಹೇಳಿದ್ದಾರೆ.

- Advertisement -


ಶಿವಮೊಗ್ಗದಲ್ಲಿ ಉಗ್ರ ಸಂಘಟನೆ ಸಂಪರ್ಕದಲ್ಲಿದ್ದ ಯುವಕರ ಬಂಧನ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಂದು ಡಿಗ್ರಿ ಪಡೆದ ಯುವಕರಿಗೆ ಕೆಲಸ ಸಿಗುತ್ತಿಲ್ಲ. ಆದ್ದರಿಂದ ಅವರು ಅಡ್ಡದಾರಿ ಹಿಡಿಯುತ್ತಿದ್ದಾರೆ. ಯುವಕರು ನಿರುದ್ಯೋಗದಿಂದ ತಪ್ಪು ದಾರಿ ಹಿಡಿಯುತ್ತಿದ್ದಾರೆ. ಇದಕ್ಕೆ ಬಿಜೆಪಿಯವರೇ ನೇರ ಹೊಣೆ ಎಂದು ಆರೋಪಿಸಿದರು.
ಉಗ್ರ ಸಂಘಟನೆ ಸಂಪರ್ಕದಲ್ಲಿರುವ ಯಾರೇ ಆಗಲಿ ಭಾರತದಲ್ಲಿ ಇಟ್ಟುಕೊಳ್ಳಬೇಡಿ ಅವರಿಗೆ ಗಲ್ಲು ಶಿಕ್ಷೆ ನೀಡಿ ಎಂದು ಹೇಳಿದರು.

Join Whatsapp