ಬೆಳಗಾವಿ | ಯುವಕನ ಬರ್ಬರ ಹತ್ಯೆ: ಸ್ಥಳದಲ್ಲಿ ಬಿಗುವಿನ ವಾತಾವರಣ..!

Prasthutha|

- Advertisement -

ಬೆಳಗಾವಿ: ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ನಡೆದಿದೆ.

ಶಾನೂರ್ ಅಲಿಯಾಸ್ ಸಂತೋಷ ಪೂಜಾರಿ(25) ಹತ್ಯೆಯಾದ ಯುವಕ.

- Advertisement -

ಅದೇ ಕಾಲೋನಿಯ ಯುವಕರಿಂದ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿ ಮನೆಗಳ ಮೇಲೆ ಮೃತನ ಕುಟುಂಬಸ್ಥರು ಕಲ್ಲು ತೂರಿ ಆಕ್ರೋಶ ಹೊರಹಾಕಿದ್ದಾರೆ.

ಆರೋಪಿಗಳ ಮನೆ ಮೇಲೆ ಕಲ್ಲು ತೂರಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Join Whatsapp