ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

Prasthutha|

- Advertisement -

ಮಂಡ್ಯ: ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಪಾಂಡವಪುರ ತಾಲೂಕಿನಲ್ಲಿ ನಡೆದಿದೆ.

ಧನಂಜಯ (22) ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ.

- Advertisement -

ಪಾಂಡವಪುರ ಪಟ್ಟಣದಲ್ಲಿ ಧನಂಜಯ ಮೊಬೈಲ್ ಅಂಗಡಿ ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದರು. ನಿನ್ನೆ ರಾತ್ರಿ ಎಂದಿನಂತೆ ಮೊಬೈಲ್ ಅಂಗಡಿಯನ್ನು ಮುಚ್ಚಿದ ಧನಂಜಯನನ್ನು ಐವರು ಯುವಕರು ನೀಲನಹಳ್ಳಿ ಗೇಟ್ ಬಳಿ ಇರುವ ಸರೋವರ ಹೋಟೆಲ್​ಗೆ ಕರೆದೊಯ್ದು, ಆತನ ಜೊತೆ ಜಗಳ ತೆಗೆದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp