Home ಟಾಪ್ ಸುದ್ದಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

ಮಂಡ್ಯ: ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಪಾಂಡವಪುರ ತಾಲೂಕಿನಲ್ಲಿ ನಡೆದಿದೆ.

ಧನಂಜಯ (22) ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ.

ಪಾಂಡವಪುರ ಪಟ್ಟಣದಲ್ಲಿ ಧನಂಜಯ ಮೊಬೈಲ್ ಅಂಗಡಿ ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದರು. ನಿನ್ನೆ ರಾತ್ರಿ ಎಂದಿನಂತೆ ಮೊಬೈಲ್ ಅಂಗಡಿಯನ್ನು ಮುಚ್ಚಿದ ಧನಂಜಯನನ್ನು ಐವರು ಯುವಕರು ನೀಲನಹಳ್ಳಿ ಗೇಟ್ ಬಳಿ ಇರುವ ಸರೋವರ ಹೋಟೆಲ್​ಗೆ ಕರೆದೊಯ್ದು, ಆತನ ಜೊತೆ ಜಗಳ ತೆಗೆದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version