ಶಿವಮೊಗ್ಗ: ಮನೆ ಮುಂದೆ ನಿಂತಿದ್ದ ಯುವಕನ ಬರ್ಬರ ಹತ್ಯೆ

Prasthutha|

ಶಿವಮೊಗ್ಗ: ಯುವಕನೊಬ್ಬನನ್ನು ಮನೆಯ ಮುಂದೆಯೇ ಮಾರಕಾಸ್ತ್ರಗಳಿಂದ ಹಲ್ಲೆಗೈದು ಹತ್ಯೆ ಮಾಡಿರುವ ಘಟನೆ ಭದ್ರಾವತಿಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ.

- Advertisement -

ಹತ್ಯೆಯಾದ ಯುವಕನನ್ನು ಮುಜಾಯಿದ್ದೀನ್ (32) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಮನೆಯಿಂದ ಹೊರಗಡೆ ಬಂದು ಗೇಟ್ ಬಳಿ ನಿಂತಿದ್ದ ವೇಳೆ ಏಕಾಏಕಿ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಹತ್ಯೆಗೈದ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ಈ ಸಂಬಂಧ ಘಟನಾ ಸ್ಥಳಕ್ಕೆ ಪೇಪರ್ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join Whatsapp