ಕೋರ್ಟ್ ಆವರಣದಲ್ಲೇ ಯುವಕನ ಗುಂಡಿಕ್ಕಿ ಹತ್ಯೆ

Prasthutha|

ಹೊಸದಿಲ್ಲಿ: ಹೊಸದಿಲ್ಲಿಯ ದ್ವಾರಕ ಕೋರ್ಟ್ ಆವರಣದಲ್ಲಿ ಯುವಕನೊಬ್ಬನನ್ನು ಗುಂಡಿಕ್ಕಿ ಬರ್ಬರ ಹತ್ಯೆಗೈದಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಉಪ್ಕಾರ್ ಎಂದು ಗುರುತಿಸಲಾಗಿದೆ.

- Advertisement -

ಪ್ರಕರಣವೊಂದರ ಆರೋಪಿಯಾಗಿದ್ದ ಉಪ್ಕಾರ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆತರಲಾಗಿತ್ತು. ವಕೀಲ ಅರುಣ್‍ಶರ್ಮಾ ಅವರ ಕೊಠಡಿ ಸಂಖ್ಯೆ 444ರಲ್ಲಿ ಆತ ಕುಳಿತಿದ್ದಾಗ ವಕೀಲರ ವೇಷದಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ನ್ಯಾಯಾಲಯದ ಆವರಣದಲ್ಲೇ ಈ ದುರ್ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.

Join Whatsapp