ನಿರುದ್ಯೋಗದಿಂದ ನೊಂದ ಯುವಕ ಆತ್ಮಹತ್ಯೆಗೆ ಶರಣು

Prasthutha|

ಖಮ್ಮಂ: ಉದ್ಯೋಗ ಸಿಗದೆ ಖಿನ್ನತೆಗೆ ಒಳಗಾಗಿ ನಿರುದ್ಯೋಗಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದ ಖಮ್ಮಂನಲ್ಲಿ ಮಂಗಳವಾರ ನಡೆದಿದೆ.

- Advertisement -


ಮೃತ ಯುವಕನನ್ನು ಮಹಬೂಬಾಬಾದ್ ಜಿಲ್ಲೆಯ ಬಯ್ಯಾರಂ ಗ್ರಾಮದ ಮುತ್ಯಾಲ ಸಾಗರ್ (25) ಎಂದು ಗುರುತಿಸಲಾಗಿದೆ. ಪದವಿ ಮುಗಿಸಿ ಹಲವು ವರ್ಷಗಳಿಂದ ಉದ್ಯೋಗ ಸಿಗದೆ ನೊಂದುಕೊಂಡಿದ್ದ ಯುವಕ ಮಂಗಳವಾರ ಖಮ್ಮಂನ ರೈಲ್ವೆ ಹಳಿಯಲ್ಲಿ ಶವವಾಗಿ ಪತ್ತೆಯಾಗಿರುವುದು ಗ್ರಾಮಸ್ಥರನ್ನು ತೀವ್ರ ದುಃಖಕ್ಕೀಡುಮಾಡಿದೆ.


ಆತ್ಮಹತ್ಯೆಗೂ ಮುನ್ನ ಈತ ತನ್ನ ಫೋನ್‌ನಲ್ಲಿ “ಕಳೆದ ಕೆಲವು ವರ್ಷಗಳಿಂದ ಉದ್ಯೋಗದ ಅಧಿಸೂಚನೆಗಾಗಿ ಕಾದು ಕುಳಿತಿದ್ದೆ, ಆದರೆ ಸರ್ಕಾರದಿಂದ ಯಾವುದೇ ಅಧಿಸೂಚನೆಗಳನ್ನು ಹೊರಡಿಸಲಾಗಿಲ್ಲ. ಇದಕ್ಕೆ ಮುಖ್ಯಮಂತ್ರಿ ಕೆಸಿಆರ್ ಕಾರಣ’’ ಎಂದು ಡೆತ್ ನೋಟ್ ಬರೆದಿದ್ದ.

- Advertisement -


ಕಾಕತೀಯ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮುಗಿಸಿದ್ದ ಸಾಗರ್ ಕಲಿಕೆಯಲ್ಲಿ ತುಂಬಾ ಮುಂಚೂಣಿಯಲ್ಲಿದ್ದರು. ಕಳೆದ ಕೆಲ ತಿಂಗಳುಗಳಿಂದ ಕೆಲಸ ಸಿಗದೇ ತೀವ್ರ ಖಿನ್ನತೆಗೆ ಒಳಗಾಗಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಿದರು.

Join Whatsapp
Exit mobile version