ಯಡಿಯೂರಪ್ಪ ರಾಜೀನಾಮೆಯಿಂದ ಮನನೊಂದು ಯುವಕ ಆತ್ಮಹತ್ಯೆ

Prasthutha|

ಚಾಮರಾಜನಗರ : ಬಿ.ಎಸ್ . ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಮನನೊಂದು ಅಭಿಮಾನಿಯೊಬ್ಬ ನೇಣಿಗೆ ಶರಣಾಗಿ ಘಟನೆ ಇದು ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ . ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಚಿಕ್ಕನಾಗಪ್ಪ ಎಂಬವರ ಪುತ್ರ ರವಿ ( 35 ) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ . ನಿನ್ನ ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ತೀರ ಬೇಸರದಿಂದ ಇದ್ದ ರವಿ ಮಂಗಳವಾರ ಮುಂಜಾನೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ .

- Advertisement -

ಈ ಬಗ್ಗೆ ಟ್ಟೀಟ್ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕೀಯದಲ್ಲಿ ಏರಿಳಿತಗಳಿಸಿ ಸಹಜ , ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳುವುದು ತಪ್ಪು, ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

Join Whatsapp