ಕೊಣಾಜೆಯಲ್ಲಿ ಯುವಕ ಆತ್ಮಹತ್ಯೆ

Prasthutha|

ಕೊಣಾಜೆ: ಕೊಣಾಜೆ ಠಾಣಾ ವ್ಯಾಪ್ತಿಯ ಅಡ್ಕರೆಯಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ರಾತ್ರಿ ಸಂಭವಿಸಿದೆ.

- Advertisement -

ಕೊಣಾಜೆ ಸಮೀಪದ ನಾರಾಯಣ ಶೆಟ್ಟಿ ಎಂಬವರ ಪುತ್ರ ಮಹೇಶ್ ಶೆಟ್ಟಿ(35) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ಮಹೇಶ್ ಶೆಟ್ಟಿ ಅವಿವಾಹಿತರಾಗಿದ್ದಾರೆ.ಓರ್ವನೆ ಪುತ್ರರಾಗಿದ್ದಾರೆ.

ಮಹೇಶ್ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ‌ ವೇಳೆ ನೇಣು ಬಿಗಿದು‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಲೆಕ್ಟ್ರಿಕಲ್ ಕೆಲಸ ಮಾಡಿಕೊಂಡಿದ್ದ ‌ಮಹೇಶ್ ಆತ್ಮಹತ್ಯೆಯ ನಿಖರ ಕಾರಣ‌ ತಿಳಿದುಬಂದಿಲ್ಲ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

Join Whatsapp