Home ಕರಾವಳಿ ಮಲ್ಲೂರು: ಕೊರೋನ ನಿಯಮ ಉಲ್ಲಂಘಿಸಿದ್ದನ್ನು ಪ್ರಶ್ನಿಸಿದ PDO ಮೇಲೆ ಯುವಕರಿಂದ ಮಾರಣಾಂತಿಕ ಹಲ್ಲೆ

ಮಲ್ಲೂರು: ಕೊರೋನ ನಿಯಮ ಉಲ್ಲಂಘಿಸಿದ್ದನ್ನು ಪ್ರಶ್ನಿಸಿದ PDO ಮೇಲೆ ಯುವಕರಿಂದ ಮಾರಣಾಂತಿಕ ಹಲ್ಲೆ

ಮಲ್ಲೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಂದ್ರ ಶೆಟ್ಟಿಯವರ ಮೇಲೆ ಅಪರಿಚಿತ ಯುವಕರ ಗುಂಪು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣ ಮಲ್ಲೂರಿನಲ್ಲಿ ನಡೆದಿದೆ.
ಇಂದು ಅಪರಾಹ್ನ ಮಲ್ಲೂರಿನ ಬದ್ರಿಯಾನಗರ ಕ್ರಿಕೆಟ್ ಮೈದಾನದಲ್ಲಿ ನಿಂತಿದ್ದ ಐದರಿಂದ ಆರರಷ್ಟಿದ್ದ ಅಪರಿಚಿತ ಯುವಕರ ಗುಂಪೊಂದು ಮಾಸ್ಕ್ ಹಾಗೂ ಸಾಮಾಜಿಕ ಅಂತರ ಪಾಲಿಸದೇ ಇರುವುದನ್ನು ಗಮನಿಸಿದ ಪಿಡಿಒ ಸ್ಥಳಕ್ಕೆ ತೆರಳಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಪಾಲಿಸುವಂತೆ ಕೇಳಿಕೊಂಡಿದ್ದಾರೆ. ಜೊತೆಗೆ ತಮ್ಮ ಮೊಬೈಲಿನಿಂದ ಪೋಟೋ ಸೆರೆ ಹಿಡಿದು ಪಂಚಾಯತ್ ಗೆ ತೆರಳಿದ್ದಾರೆ.
ಇದರಿಂದ ಕೋಪಗೊಂಡ ಗುಂಪು ನೇರವಾಗಿ ಪಂಚಾಯತ್ ಗೆ ನುಗ್ಗಿ ದಾಂಧಲೆ ನಡೆಸಿದ್ದು, ಪಿಡಿಓ ರ ಮೊಬೈಲ್ ಕಸಿದು ಪೋಟೋ ಡಿಲೀಟ್ ಮಾಡಿದ್ದಾರೆ. ಸಿಬ್ಬಂದಿಗಳ ಸಮ್ಮುಖದಲ್ಲೇ ಕರ್ತವ್ಯ ನಿರತ ಪಿಡಿಓ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಮತ್ತು ಹಲ್ಲೆ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

Join Whatsapp
Exit mobile version