ಮಮತಾ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಂಧಿತ ಯೂಟ್ಯೂಬರ್ ನನ್ನು ಕೋಲ್ಕತಾಗೆ ಕರೆತಂದ ಪೊಲೀಸರು

Prasthutha|

ಕೋಲ್ಕತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ನಿಂದಿಸಿದ ಆರೋಪದ ಮೇಲೆ ಗೋವಾದಲ್ಲಿ ಕೋಲ್ಕತಾ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಯೂಟ್ಯೂಬರ್ ಮತ್ತು ವ್ಲಾಗರ್ ರೊದ್ದೂರ್ ರಾಯ್ ಅವರನ್ನು ಬುಧವಾರ ಸಂಜೆ ಟ್ರಾನ್ಸಿಟ್ ರಿಮಾಂಡ್ ಮೇಲೆ ಕೋಲ್ಕತಾಗೆ ಕರೆತರಲಾಯಿತು.

- Advertisement -

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ವೀಡಿಯೊದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರನ್ನು ನಿಂದಿಸಿದ ಆರೋಪದ ಮೇಲೆ ರಾಯ್ ಅವರನ್ನು ಜೂನ್ 7 ರಂದು ಗೋವಾದಿಂದ ಬಂಧಿಸಲಾಗಿತ್ತು.

ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp