ನಿರ್ಮಾಣ ಹಂತದಲ್ಲಿದ್ದ YSR ಕಾಂಗ್ರೆಸ್‌ ಪಕ್ಷದ ಕಚೇರಿ ಧ್ವಂಸ: ಸೇಡಿನ ರಾಜಕಾರಣ ಎಂದು ಆಕ್ರೋಶ

Prasthutha|

ಅಮರಾವತಿ: ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ತಾಡೆಪಲ್ಲಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (YSRCP) ಕಚೇರಿಯನ್ನು ಮುನ್ಸಿಪಲ್ ಕಾರ್ಪೊರೇಷನ್ ಶನಿವಾರ ಮುಂಜಾನೆ ನೆಲಸಮಗೊಳಿಸಿದೆ.

- Advertisement -

ಆಂಧ್ರ ಪ್ರದೇಶ ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಧಿಕಾರ ಹಾಗೂ ಮಂಗಲಗಿರಿ ತಡೆಪಲ್ಲಿ ನಗರ ಪಾಲಿಕೆ ಅಧಿಕಾರಿಗಳು ಪೊಲೀಸರ ಸಮ್ಮುಖದಲ್ಲಿ ಕಟ್ಟವನ್ನು ಧ್ವಂಸಗೊಳಿಸುವ ಕೆಲಸ ಮಾಡಿದ್ದಾರೆ. ನೆಲಸಮವಾದ ವೈಎಸ್‌ ಆರ್‌ ಸಿಪಿ ಕಟ್ಟಡವು ಸೀತಾನಗರಂನ ಬೋಟ್ ಯಾರ್ಡ್ ಆರ್‌ ಎಸ್ ನಂ.202-ಎ-1 ನಲ್ಲಿ ಸುಮಾರು 870.40 ಚದರ ಅಡಿಯಷ್ಟು ಸುತ್ತಳತೆ ಹೊಂದಿತ್ತು.

ಕಟ್ಟಡ ಧ್ವಂಸಗೊಳಿಸಿದ ಬೆನ್ನಲ್ಲೇ ವೈಎಸ್‌ಆರ್‌ಸಿಪಿ, ಟಿಡಿಪಿ ವಿರುದ್ಧ ಹರಿಹಾಯ್ದಿದೆ. ತನಿಖೆ ಕೋರ್ಟ್‌ ನಲ್ಲಿದ್ದರೂ ಧ್ವಂಸಗೊಳಿಸುವ ಕ್ರಮ ಮುಂದುವರಿದಿದೆ. ಇದು ಸೇಡಿನ ರಾಜಕಾರಣ. ಸರ್ವಾಧಿಕಾರಿಗಳಂತೆ ಬುಲ್ಡೋಜರ್‌ ಬಳಿಸಿ ಕಟ್ಟಡವನ್ನು ನೆಲಸಮಗೊಳಿಸಿದ್ದಾರೆ ಎಂದು ಕಿಡಿಕಾರಿದೆ.

- Advertisement -

Join Whatsapp
Exit mobile version