Home ಟಾಪ್ ಸುದ್ದಿಗಳು ಕೇಜ್ರಿವಾಲ್ ಮನೆ ಮೇಲೆ ದಾಳಿ ಮಾಡಿದ್ದ ಯುವಮೋರ್ಚಾ ಕಾರ್ಯಕರ್ತನಿಗೆ ಬಿಜೆಪಿ ಟಿಕೆಟ್

ಕೇಜ್ರಿವಾಲ್ ಮನೆ ಮೇಲೆ ದಾಳಿ ಮಾಡಿದ್ದ ಯುವಮೋರ್ಚಾ ಕಾರ್ಯಕರ್ತನಿಗೆ ಬಿಜೆಪಿ ಟಿಕೆಟ್

ನವದೆಹಲಿ: ಕೆಲ ತಿಂಗಳ ಹಿಂದೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆ ಮೇಲೆ ದಾಳಿ ಮಾಡಿದ್ದ ಯುವಮೋರ್ಚಾ ಕಾರ್ಯಕರ್ತನೊಬ್ಬನಿಗೆ ಬಿಜೆಪಿ ಈ ಸಲ ಮಹಾನಗರ ಪಾಲಿಕೆ ಟಿಕೆಟ್ ನೀಡಿದೆ.

27 ವರ್ಷದ ಪ್ರದೀಪ್ ತಿವಾರಿ ಬಿಜೆಪಿಯಿಂದ ಟಿಕೆಟ್ ಪಡೆದ ಅಭ್ಯರ್ಥಿಯಾಗಿದ್ದು, ಈತ ಕೇಜ್ರಿವಾಲ್ ಅವರ ಸಿವಿಲ್ ಲೈನ್ಸ್ ನಿವಾಸದ ಹೊರಗಿನ ಗೇಟ್ ಮತ್ತು ಸಿಸಿಟಿವಿ ಧ್ವಂಸಗೊಳಿಸಿ ಬಂಧನಕ್ಕೊಳಗಾಗಿದ್ದ  ಬಿಜೆಪಿ ಯುವಮೋರ್ಚಾದ 8 ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾನೆ.

ಬಿಜೆಪಿ ಅಭ್ಯರ್ಥಿ ಆಯ್ಕೆಯನ್ನು ಟೀಕಿಸಿರುವ ಆಪ್, ಬಿಜೆಪಿ ಗೂಂಡಾಗಳನ್ನು ತಯಾರು ಮಾಡುತ್ತಿದೆ. ಗೂಂಡಾಗಿರಿ ಮತ್ತು ವಿಧ್ವಂಸಕ ಕೃತ್ಯ ಮಾಡುವವರನ್ನು ಬೆಂಬಲಿಸುತ್ತದೆ  ಎಂಬುದು ಇದೀಗ ಸ್ಪಷ್ಟವಾಗಿದೆ ಎಂದು ಹೇಳಿದೆ.

ಮುಂಬರುವ ಪಾಲಿಕೆ ಚುನಾವಣೆಯಲ್ಲಿ ತಿವಾರಿ ರಮೇಶ್ ನಗರ ವಾರ್ಡ್ ನಿಂದ ನಾಮಪತ್ರ ಸಲ್ಲಿಸಿದ್ದಾನೆ.

ಕಾಶ್ಮೀರ್ ಫೈಲ್ಸ್ ಚಿತ್ರದ ಕುರಿತು ಕೇಜ್ರಿವಾಲ್ ಅವರ ಹೇಳಿಕೆ ಖಂಡಿಸಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಈ ಸಂದರ್ಭ ಕೇಜ್ರಿವಾಲ್ ನಿವಾಸದ ಗೇಟ್ಗೆ ಕೆಂಪು ಬಣ್ಣ ಬಳಿದು ಆಕ್ರೋಶ ವ್ಯಕ್ತಪಡಿಸಲಾಗಿತ್ತು. ಪ್ರದೀಪ್ ತಿವಾರಿ ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದನು.

Join Whatsapp
Exit mobile version