ಡಿಸೆಂಬರ್ ತಿಂಗಳಲ್ಲಿ ಯುವ ನಿಧಿ ಯೋಜನೆ ಪ್ರಾರಂಭ: ಕೆ.ಹೆಚ್.ಮುನಿಯಪ್ಪ

Prasthutha|

ದಾವಣಗೆರೆ: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 30 ರಂದು ಜಾರಿಗೊಳಿಸಲಾಗುತ್ತಿದೆ. ಈ ನಡುವೆ ಐದನೇ ಗ್ಯಾರಂಟಿ ಯೋಜನೆಯಾಗಿರುವ ಯುವ ನಿಧಿ ಯೋಜನೆಯ ಬಗ್ಗೆ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಸುಳಿವು ನೀಡಿದ್ದು, ಡಿಸೆಂಬರ್ ತಿಂಗಳಿನಲ್ಲಿ ಜಾರಿಗೊಳಿಸಲಾಗುವುದು ಎಂದಿದ್ದಾರೆ.

- Advertisement -

ಐದನೇ ಗ್ಯಾರಂಟಿ ‘ಯುವ ನಿಧಿ’ ಯೋಜನೆಯನ್ನು ಈ ವರ್ಷದ ಡಿಸೆಂಬರ್‌ನಿಂದ ಜಾರಿಗೊಳಿಸಲಾಗುವುದು ಎಂದು ಮುನಿಯಪ್ಪ ಹೇಳಿದರು. ಕರ್ನಾಟಕ ಕಾಂಗ್ರೆಸ್ ಘೋಷಿಸಿದ ಐದು ಯೋಜನೆಗಳ ಪೈಕಿ ಮೂರು ಯೋಜನೆಗಳನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ನಾಲ್ಕನೇ ಯೋಜನೆ ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 30 ರಂದು ಜಾರಿಗೆ ತರಲಾಗುವುದು ಎಂದರು.

Join Whatsapp