ಜಾತಿ ನಿಂದನೆ ಆರೋಪ: ಯುವರಾಜ್ ಸಿಂಗ್ ಬಂಧನ !

Prasthutha|

ಹಿಸಾರ್: ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಪೊಲೀಸರು ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಬಂಧಿಸಿದ್ದಾರೆ.

- Advertisement -

ಯುವರಾಜ್​ ಕಳೆದ ವರ್ಷ ರೋಹಿತ್ ಶರ್ಮಾ ಜೊತೆ ಇನ್ ​ಸ್ಟಾಗ್ರಾಮ್​ ಲೈವ್ ಚಾಟ್‌ ನಲ್ಲಿ ಯುಜ್ವೇಂದ್ರ ಚಹಲ್ ಬಗ್ಗೆ ಮಾತನಾಡುವ ವೇಳೆ ಪರಿಶಿಷ್ಟ ಜಾತಿಯನ್ನು ಉಲ್ಲೇಖಿಸಿ ಅವಹೇಳನ ಪದ ಬಳಸಿದ್ದ ಆರೋಪ ಎದುರಿಸುತ್ತಿದ್ದಾರೆ. ಈ ಆರೋಪದಲ್ಲಿ ಯುವರಾಜ್ ಸಿಂಗ್ ವಿರುದ್ಧ ಹರ್ಯಾಣ ಜಿಲ್ಲೆಯ ಹನ್ಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಯುವರಾಜ್ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್ 3 (1) (ಆರ್) ಮತ್ತು 3 (1) (ಎಸ್) ಹಾಗೂ ಐಪಿಸಿ 153, 153ಎ, 295, 505 ಸೆಕ್ಷನ್ ​ನಗಳ ಅಡಿಯಲ್ಲಿ 2020ರ ಜೂನ್​ ನಲ್ಲಿ ವಕೀಲರೊಬ್ಬರು ದೂರು ದಾಖಲಿಸಿದ್ದರು. ಅಂದು ಯುವಿ ನಿರೀಕ್ಷಣಾ ಜಾಮೀನು ಪಡೆದಿದ್ದರು. ಹಂಸಿ ಪೊಲೀಸರು ಯುವರಾಜ್​ ಸಿಂಗ್​ ಅವರನ್ನು ಬಂಧಿಸಿದ ನಂತರ ವಿಚಾರಣೆಗೆ ಒಳಪಡಿಸಿದ್ದಾರೆ.

- Advertisement -

ನಂತರ ಹೈಕೋರ್ಟ್​ ಆದೇಶದ ಮೇರೆಗೆ ಔಪಚಾರಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಹಿಂದೆ ಯುವರಾಜ್​ಗೆ ಹೈಕೋರ್ಟ್​ ನಿರೀಕ್ಷಣಾ ಜಾಮೀನು ನೀಡಿತ್ತು.

Join Whatsapp