Home ಟಾಪ್ ಸುದ್ದಿಗಳು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಝಮೀರ್ ಅಹ್ಮದ್ ನೇಮಕ

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಝಮೀರ್ ಅಹ್ಮದ್ ನೇಮಕ

ಹೊಸಪೇಟೆ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಝಮೀರ್ ಅಹ್ಮದ್ ಖಾನ್ ನೇಮಕ ಆಗಿದ್ದಾರೆ. ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸದ್ಯಕ್ಕೆ ಝಮೀರ್ ಅಹ್ಮದ್ ಖಾನ್ ಅವರನ್ನು ನೇಮಕ ಮಾಡಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ನಡೆಸಿದ ಬಳಿಕ ಸಿಎಂ ಈ ಮಾಹಿತಿ‌ ನೀಡಿದರು.

ವಿಜಯನಗರ ಜಿಲ್ಲೆಯಲ್ಲಿ ಪ್ರಸ್ತುತ 200 ಬೆಡ್ ಆಸ್ಪತ್ರೆ ಕಾರ್ಯ ನಡೆಯುತ್ತಿದೆ. ಆದರೆ ಬೇಡಿಕೆ ಹಿನ್ನೆಲೆಯಲ್ಲಿ ಇದನ್ನು 400 ಬೆಡ್ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲು ಪ್ರಸ್ತಾವನೆ ಸಲ್ಲಿಸಲು ಸಿಎಂ ಸೂಚಿಸಿದ್ದಾರೆ.

Join Whatsapp
Exit mobile version