ಝುಬೇರ್ ಪ್ರಕರಣ: ಉತ್ತರ ಪ್ರದೇಶ ಸರ್ಕಾರದಿಂದ ತನಿಖೆಗೆ ವಿಶೇಷ ತಂಡ ನೇಮಕ

Prasthutha|

ಲಖನೌ: ಫ್ಯಾಕ್ಟ್ ಚೆಕರ್ ಮುಹಮ್ಮದ್ ಝುಬೇರ್ ವಿರುದ್ಧದ ಪ್ರಕರಣಗಳನ್ನು ತನಿಖೆ ನಡೆಸಲು ಉತ್ತರ ಪ್ರದೇಶದ ಪೊಲೀಸರು ವಿಶೇಷ ತಂಡ ಅಥವಾ ಎಸ್.ಐ.ಟಿ ಅನ್ನು ರಚಿಸಿದ್ದಾರೆ.

- Advertisement -

ಉತ್ತರ ಪ್ರದೇಶದ ಸೀತಾಪುರದಲ್ಲಿ ಅವರ ವಿರುದ್ಧ ದಾಖಲಾದ ಪ್ರಕರಣದಲ್ಲಿ ಮುಹಮ್ಮದ್ ಝುಬೇರ್ ಅವರಿಗೆ ಸುಪ್ರೀಮ್ ಕೋರ್ಟ್ ಮಧ್ಯಂತರ ಜಾಮೀನನ್ನು ವಿಸ್ತರಿಸಿದ ದಿನದಂದೇ ಈ ಬೆಳವಣಿಗೆ ನಡೆದಿದೆ.

ಈ ಮಧ್ಯೆ ಸುಪ್ರೀಮ್ ಕೋರ್ಟ್ ಆದೇಶ ಕೇವಲ ಸೀತಾಪುರ ಪ್ರಕರಣಕ್ಕೆ ಸೀಮಿತವಾಗಿದೆ ಮತ್ತು ದೆಹಲಿ, ಲಖಂಪುರದಲ್ಲಿ ಮುಹಮ್ಮದ್ ಝುಬೇರ್ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸುಪ್ರೀಮ್ ಕೋರ್ಟ್’ನ ಆದೇಶ ಅನ್ವಯವಾಗುವುದಿಲ್ಲ. ಇದರಿಂದಾಗಿ ಮುಹಮ್ಮದ್ ಜೈಲಿನಲ್ಲಿಯೇ ಕಳೆಯಬೇಕಾಗಿದೆ ಎಂದು ತಿಳಿದು ಬಂದಿದೆ.

- Advertisement -

ಸದ್ಯ ಪತ್ರಕರ್ತ ಮುಹಮ್ಮದ್ ಝುಬೇರ್ ವಿರುದ್ಧ ಉತ್ತರ ಪ್ರದೇಶದ ಸೀತಾಪುರ, ಲಖಿಂಪುರ, ಹತ್ರಾಸ್ ಮತ್ತು ಮುಝಾಫರ್ ನಗರದಲ್ಲಿ ಪ್ರಕರಣಗಳು ದಾಖಲಾಗಿವೆ.

Join Whatsapp